ಬೆಂಗಳೂರು: ಹೆಬ್ಬಾಳ ಶಾಸಕ ಭೈರತಿ ಸುರೇಶ್ ಅವರಿಗೆ ಶಿವು ಎಂಬಾತ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. ಇದಕ್ಕೆ ಅಪಘಾತವೇ ಕಾರಣವೆಂಬುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.
ಕೆ.ಆರ್.ಪುರ ಸಮೀಪದ ಭೈರತಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯಿಂದ ಭೈರತಿ ಸುರೇಶ್ ತಪ್ಪಿಸಿಕೊಂಡಿದ್ದಾರೆ.
ಆರೋಪಿ ಶಿವು, ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ. ಆತ ಚಾಕು ಇರಿಯಲು ಕಾರಣವೇನು ಎಂಬುದು ಗೊತ್ತಾಗಿಲ್ಲ.
ಕೊತ್ತನೂರು ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
‘ಬೈರತಿ ಅವರ ಕಾರು ಹಾಗೂ ಶಿವು ಅವರ ಬೈಕ್ ನಡುವೆ ಅಪಘಾತ. ಅದರಿಂದ ಕೋಪಗೊಂಡ ಶಿವು, ಶಾಸಕರ ಕಾರಿನ ಚಾಲಕನನ್ನು ಪ್ರಶ್ನಿಸಿದ್ದ. ಅದೇ ವೇಳೆಯೇ ಮಾತಿಗೆ ಮಾತು ಬೆಳೆದಿತ್ತು. ಕಾರಿನಿಂದ ಇಳಿದ ಶಾಸಕ ಜೊತೆಯೂ ವಾಗ್ವಾದ ನಡೆಸಿದ್ದ ಶಿವು. ಇದೇ ವೇಳೆಯೇ ಹಲ್ಲೆಗೆ ಯತ್ನಿಸಿದ್ದ. ಶಿವುನನ್ನು ಹಿಡಿದಗನ್ ಮ್ಯಾನ್ ಪೊಲೀಸರಿಗೆ ಒಪ್ಪಿಸಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.