ADVERTISEMENT

ಯಡಿಯೂರಪ್ಪ ಭೇಟಿ ಮಾಡಿದ ನಾಗೇಶ್‌

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2019, 19:40 IST
Last Updated 5 ಆಗಸ್ಟ್ 2019, 19:40 IST

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿರುವ ಪಕ್ಷೇತರ ಶಾಸಕ ನಾಗೇಶ್‌ ಸೋಮವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಡಾಲರ್ಸ್‌ ಕಾಲೊನಿಯ ನಿವಾಸದಲ್ಲಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಸಚಿವ ಸ್ಥಾನದ ಆಕಾಕ್ಷಿಯಾಗಿರುವ ನಾಗೇಶ್‌ ಅವರ ಭೇಟಿ ಮಹತ್ವ ಪಡೆದಿದೆ. ಯಡಿಯೂರಪ್ಪ ಅವರು ದೆಹಲಿಗೆ ಸಂಜೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಒಯ್ದಿದ್ದಾರೆ. ಪಟ್ಟಿಯಲ್ಲಿ ನಾಗೇಶ್‌ ಅವರ ಹೆಸರೂ ಸೇರಿದೆ ಎಂದು ಮೂಲಗಳು ಹೇಳಿವೆ. ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೆ ಕೋರಲು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದಾಗಿ ನಾಗೇಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT