ಯಲಹಂಕ: ಚಿಕ್ಕಬಳ್ಳಾಪುರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ. ಸುಧಾಕರ್ ಪರ, ಬಿಜೆಪಿ–ಜೆಡಿಎಸ್ ಜಂಟಿ ಪ್ರಚಾರಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್, ಅದ್ದಿ
ಗಾನಹಳ್ಳಿಯ ಪಟಾಲಮ್ಮ ದೇವಸ್ಥಾನದಲ್ಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
‘ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡಲು ಚಿಕ್ಕಬಳ್ಳಾ ಪುರ ಕ್ಷೇತ್ರದಲ್ಲಿ ಬಿಜೆಪಿ ಅತ್ಯಧಿಕ ಮತಗಳನ್ನು ಪಡೆಯಲು ಸಂಕಲ್ಪಮಾಡಿ ಪ್ರಚಾರಕಾರ್ಯ ಆರಂಭಿಸಲಾಗಿದೆ’ ಎಂದು ವಿಶ್ವನಾಥ್ ತಿಳಿಸಿದರು.
ರಾಜಾನುಕುಂಟೆ, ಅರಕೆರೆ, ಸೊಣ್ಣೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.