ADVERTISEMENT

ಮೆಟ್ರೊ ಸಂಚಾರ ಅವಧಿ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಶಾಸಕ ಸುರೇಶ್‌ ಕುಮಾರ್ ಪತ್ರ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 7:34 IST
Last Updated 17 ಸೆಪ್ಟೆಂಬರ್ 2021, 7:34 IST
ಎಸ್. ಸುರೇಶ್‌ ಕುಮಾರ್
ಎಸ್. ಸುರೇಶ್‌ ಕುಮಾರ್   

ಬೆಂಗಳೂರು: ‘ನಗರದಲ್ಲಿ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಇದು ನ್ಯಾಯಯುತವಾದ ಕೂಗು. ರಾತ್ರಿ 8ರ ನಂತರವೂ ಮೆಟ್ರೊ ರೈಲು ಸಂಚಾರ ಸಮಯ ವಿಸ್ತರಿಸಬೇಕು‘ ಎಂದು ಒತ್ತಾಯಿಸಿ ಶಾಸಕ ಎಸ್. ಸುರೇಶ್‌ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

‘ಈ ಪತ್ರವನ್ನು ನಾನು ಶಾಸಕನಾಗಿ ಮಾತ್ರ ಬರೆಯುತ್ತಿಲ್ಲ. ಮೆಟ್ರೊ ರೈಲಿನ ಒಬ್ಬ ಪ್ರಯಾಣಿಕನಾಗಿಯೂ ಬರೆಯುತ್ತಿದ್ದೇನೆ. ಮೆಟ್ರೊ ಕಾರ್ಯಾಚರಣೆ ಸಮಯವನ್ನು ರಾತ್ರಿ 10ರವರೆಗೆ ವಿಸ್ತರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.