ADVERTISEMENT

ಸರಣಿ ಅಪಘಾತ: ಪೊಲೀಸ್‌ ವಿಚಾರಣೆಗೆ ಹಾಜರಾದ ಶಾಸಕ ಹ್ಯಾರಿಸ್‌ ಮಗ ಮೊಹ್ಮದ್ ನಲಪಾಡ್‌

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 11:46 IST
Last Updated 12 ಫೆಬ್ರುವರಿ 2020, 11:46 IST
ಮೊಹ್ಮದ್‌ ನಲಪಾಡ್‌
ಮೊಹ್ಮದ್‌ ನಲಪಾಡ್‌   

ಬೆಂಗಳೂರು: ಮೇಖ್ರಿ ವೃತ್ತದ ಕಳೆಸೇತುವೆ ಬಳಿ ಭಾನುವಾರ (ಫೆ. 9) ಮಧ್ಯಾಹ್ನ ಸಂಭವಿಸಿದ್ದ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಶಾಸಕ ಎನ್‌.ಎ. ಹ್ಯಾರಿಸ್‌ ಮಗ ಮೊಹ್ಮದ್‌ ನಲಪಾಡ್‌ ಬುಧವಾರವಿಚಾರಣೆಗೆ ಹಾಜರಾದರು.

ಪ್ರಕರಣದ ತನಿಖಾಧಿಕಾರಿ ಬಿ.ಪಿ. ನಾಗರಾಜು ಅವರು ನಲಪಾಡ್‌ ಅವರ ಹೇಳಿಕೆಯನ್ನು ದಾಖಲಿಕೊಂಡರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನಲಪಾಡ್‌ ಅವರಿಗೆ ಮಂಗಳವಾರ ನೋಟಿಸ್‌ ನೀಡಿದ್ದರು.

ಸಂಚಾರ ವಿಭಾಗದ ಜಂಟಿ ಕಮಿಷನರ್‌ ಬಿ.ಆರ್‌. ರವಿಕಾಂತೇಗೌಡ ಮಾತನಾಡಿ, ’ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ನಲಪಾಡ್‌ ಅವರನ್ನು ಬಂಧಿಸಿ, ಬಾಂಡ್‌ ಬರೆಸಿಕೊಂಡು ಠಾಣಾ ಜಾಮೀನು (ಸ್ಟೇಷನ್‌ ಬೇಲ್‌) ನೀಡಿದ್ದೇವೆ’ ಎಂದು ತಿಳಿಸಿದರು.

ADVERTISEMENT

‘ನಲಪಾಡ್‌ ಕಾರು ಚಲಾಯಿಸಿಲ್ಲ. ಬೇರೊಬ್ಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು. ಅವರ ವಿರುದ್ಧ ಷಡ್ಯಂತ್ರರೂಪಿಸಲಾಗಿದೆ’ ಎಂದು ನಲಪಾಡ್‌ ಪರ ವಕೀಲ ಉಸ್ಮಾನ್‌ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.