ADVERTISEMENT

ಮೊಬೈಲ್ ಸುಲಿಗೆ; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 20:25 IST
Last Updated 20 ಏಪ್ರಿಲ್ 2021, 20:25 IST

ಬೆಂಗಳೂರು: ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ ಮೊಬೈಲ್ ಸುಲಿಗೆ ಮಾಡಿದ್ದ ಆರೋಪಿ ಸೈಯದ್ ಇರ್ಫಾನ್ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಜಗಜೀವನರಾಮ್ ನಗರದ ಇರ್ಫಾನ್, ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 1.90 ಲಕ್ಷ ಮೌಲ್ಯದ 7 ಮೊಬೈಲ್‌ಗಳು ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ, ತಮ್ಮ ಪತ್ನಿ ಜೊತೆಯಲ್ಲಿ ಏಪ್ರಿಲ್ 13ರಂದು ಪಶ್ಚಿಮ ಕಾರ್ಡ್‌ ರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದರು. ಅದೇ ಸಂದರ್ಭದಲ್ಲೇ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿ, ದೂರುದಾರರ ಪತ್ನಿಯ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು’ ಎಂದೂ ತಿಳಿಸಿದರು.

ADVERTISEMENT

‘ನಗರದ ಹಲವೆಡೆ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡುತ್ತಿದ್ದ ಆರೋಪಿ, ಸಾರ್ವಜನಿಕರ ಮೊಬೈಲ್ ಸುಲಿಗೆ ಮಾಡುತ್ತಿದ್ದ. ಹಲವು ಠಾಣೆ ವ್ಯಾಪ್ತಿಯಲ್ಲೂ ಆತ ಕೃತ್ಯ ಎಸಗಿರುವ ಮಾಹಿತಿ ಇದೆ’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.