ADVERTISEMENT

ಬೆಂಗಳೂರು: ಕೈದಿಯ ಒಳ ಉಡುಪಿನಲ್ಲಿದ್ದ ಮೊಬೈಲ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2023, 23:30 IST
Last Updated 21 ಅಕ್ಟೋಬರ್ 2023, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಯೊಬ್ಬರ ಬಳಿ ಮೊಬೈಲ್ ಹಾಗೂ ಬ್ಯಾಟರಿ ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ.

‘ಅಪರಾಧ ಪ್ರಕರಣವೊಂದರ ವಿಚಾರಣಾಧೀನ ಕೈದಿ ಸೈಯದ್ ಶಬಾಜ್ ಬಳಿ ಮೊಬೈಲ್ ಹಾಗೂ ಬ್ಯಾಟರಿ ಪತ್ತೆಯಾಗಿದೆ. ಜೈಲಿನ ಅಧಿಕಾರಿಗಳು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ಕೈದಿ ಸೈಯದ್‌ ಶಬಾಜ್‌ನನ್ನು ಇತ್ತೀಚೆಗೆ ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿತ್ತು. ವಿಚಾರಣೆ ಮುಗಿದ ನಂತರ, ಆತನನ್ನು ಪುನಃ ಕಾರಾಗೃಹಕ್ಕೆ ಕರೆತರಲಾಗಿತ್ತು. ಇದೇ ವೇಳೆ ಆತನನ್ನು ತಪಾಸಣೆ ನಡೆಸಿದಾಗ, ಒಳ ಉಡುಪಿನಲ್ಲಿ ಮೊಬೈಲ್ ಹಾಗೂ ಬ್ಯಾಟರಿ ಸಿಕ್ಕಿವೆ. ಕಾರಾಗೃಹದೊಳಗೆ ಮೊಬೈಲ್ ತೆಗೆದುಕೊಂಡು ಹೋಗಿ, ಕಾನೂನು ಬಾಹಿರ ಕೃತ್ಯ ಎಸಗಲು ಸೈಯದ್ ಸಂಚು ರೂಪಿಸಿದ್ದ ಮಾಹಿತಿ ಇದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.