ADVERTISEMENT

ಬೆಂಗಳೂರು ‌| ಮೊಬೈಲ್‌ ಸುಲಿಗೆಕೋರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಜುಲೈ 2023, 7:05 IST
Last Updated 20 ಜುಲೈ 2023, 7:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಪಾದಚಾರಿಗಳಿಂದ ಮೊಬೈಲ್‌ ಕಸಿದು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕಾಮಾಕ್ಷಿಪಾಳ್ಯದ ಚರಣ್ (20), ನಂದಾ (21) ಬಂಧಿತರು.

ಕಾವೇರಿಪುರದಲ್ಲಿ ಮನೆಗೆ ನಡೆದು ತೆರಳುತ್ತಿದ್ದವರಿಂದ ಮೊಬೈಲ್‌ ಕಸಿದುಕೊಂಡು ಕ್ಷಣಾರ್ಧದಲ್ಲಿ ಇಬ್ಬರು ಪರಾರಿಯಾಗುತ್ತಿದ್ದರು. ಬಂಧಿತರಿಂದ ಒನ್‌ಪ್ಲಸ್‌ ಸೇರಿದಂತೆ ವಿವಿಧ ಕಂಪನಿಯ ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳ ಮೌಲ್ಯ ₹ 1.60 ಲಕ್ಷವೆಂದು ಅಂದಾಜಿಸಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.