ADVERTISEMENT

ಬೆಂಗಳೂರು: ಮೊಬೈಲ್ ಕಳ್ಳನ ಬೆನ್ನಟ್ಟಿ ಹಿಡಿದ ಪೊಲೀಸರು

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 6:31 IST
Last Updated 31 ಆಗಸ್ಟ್ 2020, 6:31 IST
ಮೊಬೈಲ್ ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದ ಹೊಯ್ಸಳ ವಾಹನದಲ್ಲಿದ್ದ ಪೊಲೀಸರು
ಮೊಬೈಲ್ ಕದ್ದು ಪರಾರಿಯಾಗುತ್ತಿದ್ದವನನ್ನು ಹಿಡಿದ ಹೊಯ್ಸಳ ವಾಹನದಲ್ಲಿದ್ದ ಪೊಲೀಸರು   
""

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಂದ ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಯನ್ನು ಹೊಯ್ಸಳ ವಾಹನದಲ್ಲಿದ್ದ ಪೊಲೀಸರು, ಬೆನ್ನಟ್ಟಿ ಹಿಡಿದಿದ್ದಾರೆ.

ಠಾಣೆ ಹೆಡ್ ಕಾನ್‌ಸ್ಟೇಬಲ್‌ಗಳಾದ ಅನಿಲ್ ಕುಮಾರ್ ಹಾಗೂ ಮಂಜುನಾಥ್ ಅವರು ಹೊಯ್ಸಳ ವಾಹನದ ಕರ್ತವ್ಯದಲ್ಲಿದ್ದರು. ಠಾಣೆ ವ್ಯಾಪ್ತಿಯಲ್ಲಿ ಗಸ್ತು ತಿರುಗುತ್ತಿದ್ದರು.

ರಸ್ತೆಯಲ್ಲಿ ನಡೆದುಕೊಂಡು ಹೊರಟಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಿತ್ತುಕೊಂಡು ಆರೋಪಿ ಪರಾರಿಯಾಗುತ್ತಿದ್ದ. ಆತನನ್ನು ಬೆನ್ನಟ್ಟಿದ್ದ ಹೆಡ್ ಕಾನ್‌ಸ್ಟೆಬಲ್‌ಗಳು, ಮಾರ್ಗಮಧ್ಯೆಯೇ ಹಿಡಿದು ಬಂಧಿಸಿದ್ದಾರೆ.

ADVERTISEMENT
ಮೊಬೈಲ್ ಕದ್ದು ಪರಾರಿಯಾಗುತ್ತಿದ್ದ ಬಂಧಿತ ಆರೋಪಿ

ಹೆಡ್ ಕಾನ್‌ಸ್ಟೆಬಲ್ ಅವರ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.