ಬೆಂಗಳೂರು: ಇಲ್ಲಿನ ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಕೊಂಡಜ್ಜಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಪ್ರತಿಷ್ಠಾನಕ್ಕೆ ಕಾರ್ಯಕಾರಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಜಿ. ಗುಂಡಣ್ಣ ಚಿಕ್ಕಮಗಳೂರು, ಎಂ.ಎಸ್. ಆಶಾದೇವಿ, ಜಾಣಗೆರೆ ವೆಂಕಟರಾಮಯ್ಯ, ಚಂದ್ರಶೇಖರ ನಂಗಲಿ, ಮೂಡ್ನಾಕೂಡು ಚಿನ್ನಸ್ವಾಮಿ, ಸಾಸ್ವೆಹಳ್ಳಿ ಸತೀಶ್, ಸಿರಾಜ್ ಅಹ್ಮದ್ ಮತ್ತು ಆರ್.ಜಿ.ಹಳ್ಳಿ ನಾಗರಾಜ್ ಅವರು ಪ್ರತಿಷ್ಠಾನದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.