ADVERTISEMENT

ಬೆಳ್ಳಂಬೆಳಿಗ್ಗೆ ಮಳೆ ಅಬ್ಬರ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2018, 19:03 IST
Last Updated 4 ಅಕ್ಟೋಬರ್ 2018, 19:03 IST
ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಿಂದ ಹೊರ ಬಂದ ಪ್ರಯಾಣಿಕರೊಬ್ಬರು, ಮಳೆಯಿಂದ ರಕ್ಷಿಸಿಕೊಳ್ಳಲು ಬ್ಯಾಗ್‌ನ ಆಸರೆ ಪಡೆದರು – ಪ್ರಜಾವಾಣಿ ಚಿತ್ರ 
ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದಿಂದ ಹೊರ ಬಂದ ಪ್ರಯಾಣಿಕರೊಬ್ಬರು, ಮಳೆಯಿಂದ ರಕ್ಷಿಸಿಕೊಳ್ಳಲು ಬ್ಯಾಗ್‌ನ ಆಸರೆ ಪಡೆದರು – ಪ್ರಜಾವಾಣಿ ಚಿತ್ರ    

ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆ ಜೋರಾಗಿ ಸುರಿದು ರಾತ್ರಿ ಬಿಡುವು ಕೊಟ್ಟಿದ್ದ ಮಳೆ, ಗುರುವಾರ ಬೆಳ್ಳಂಬೆಳಿಗ್ಗೆಯೇ ಅಬ್ಬರಿಸಿತು.

ಬೆಳಿಗ್ಗೆ 8 ಗಂಟೆ ಸುಮಾರಿಗೆ ನಗರದ ಹಲವೆಡೆ ಜೋರು ಮಳೆಯಾಯಿತು. ನಂತರ, ಬಿಡುವು ಕೊಡುತ್ತಲೇ ಸಂಜೆಯವರೆಗೂ ಸುರಿಯಿತು. ಅದರಿಂದಾಗಿ ರಸ್ತೆ ಮೇಲೆ ನೀರು ಹರಿದು ಹೊಳೆಯೇ ನಿರ್ಮಾಣವಾಗಿತ್ತು. ಅದರಲ್ಲೇ ವಾಹನಗಳು ಸಂಚರಿಸಿದವು.

ರಾಜಾಜಿನಗರ, ಬಸವೇಶ್ವರನಗರ, ಯಶವಂತಪುರ, ಮಲ್ಲೇಶ್ವರ, ಶಾಂತಿನಗರ, ಜಯನಗರ, ನಾಯಂಡಹಳ್ಳಿ, ಹಲಸೂರು, ಇಂದಿರಾನಗರ, ಶಿವಾಜಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಅಬ್ಬರ ಜೋರಾಗಿತ್ತು. ಉಳಿದಂತೆ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಸುರಿಯಿತು.

ADVERTISEMENT

‘ನಗರದಲ್ಲಿ ಜೋರು ಮಳೆಯಾಗಿದೆ. ಮರಗಳು ಉರುಳಿಬಿದ್ದ ಸೇರಿದಂತೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಅಧಿಕಾರಿ ತಿಳಿಸಿದರು.

ಹವಾಮಾನ ಇಲಾಖೆ ಅಧಿಕಾರಿಯೊಬ್ಬರು, ‘ನಗರದಲ್ಲಿ ಇನ್ನೆರಡು ದಿನ ಮಳೆ ಮುಂದುವರಿಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.