ADVERTISEMENT

ತಾಯಿ– ಮಗ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 1:04 IST
Last Updated 7 ಅಕ್ಟೋಬರ್ 2020, 1:04 IST

ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಮಿತ್ರಮ್ಮ (55) ಹಾಗೂ ಅವರ ಮಗ ಶಿವರಾಜ್ (25) ಎಂಬುವರು ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಬ್ಯಾಟರಾಯನಪುರ ನಿವಾಸಿ ಸುಮಿತ್ರಮ್ಮ ಹಾಗೂ ಶಿವರಾಜ್ ಸಾವಿನ ಬಗ್ಗೆ ಸಂಬಂಧಿಕರ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹಲವರ ಬಳಿ ಸಾಲ ಪಡೆದಿದ್ದ ತಾಯಿ–ಮಗ, ಅದನ್ನು ವಾಪಸು ಕೊಡಲು ಸಾಧ್ಯವಾಗಿರಲಿಲ್ಲ. ಸಾಲ ಕೊಟ್ಟವರು ಮನೆ ಬಳಿ ಬಂದು ಹಣ ವಾಪಸು ನೀಡುವಂತೆ ಒತ್ತಾಯಿಸುತ್ತಿದ್ದರು. ಬೇಸತ್ತ ತಾಯಿ–ಮಗ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದೆ. ಮರಣ ಪತ್ರವೂ ಸಿಕ್ಕಿಲ್ಲ’ ಎಂದರು.

ADVERTISEMENT

‘ಸುಮಿತ್ರಮ್ಮ ಅವರಿಗೆ ಮಂಗಳವಾರ ಸಂಜೆ ಪುತ್ರಿ ಕರೆ ಮಾಡಿದ್ದರು. ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಗಾಬರಿ
ಗೊಂಡ ಪುತ್ರಿ, ಮನೆಗೆ ಬಂದು ನೋಡಿದಾಗ ಒಳಗಿನಿಂದಲೇ ಬಾಗಿಲು ಬಂದ್ ಮಾಡಲಾಗಿತ್ತು. ಸ್ಥಳೀಯರ ನೆರವಿನಿಂದ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಮೃತದೇಹಗಳು ಕಂಡಿದ್ದವು’ ಎಂದೂ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.