ADVERTISEMENT

‘ರೈತರ ಸಾಲಮನ್ನಾ ಬದಲಿಗೆ ಸುಸ್ಥಿರ ಕೃಷಿ ಅವಶ್ಯ’

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2019, 15:42 IST
Last Updated 9 ಏಪ್ರಿಲ್ 2019, 15:42 IST
ಗೃಹ ಸಚಿವ ಎಂ.ಬಿ. ಪಾಟೀಲ, ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ, ಆ್ಯಮ್‌ಹೈಡ್ರೊ ಕಂಪನಿಯ ಸಿಇಒ ಜೆನ್ನಿ ಹ್ಯಾರಿಸ್‌, ತಾಂತ್ರಿಕ ನಿರ್ದೇಶಕ ಜೋ ಸ್ಪಾರ್ಟ್ಸ್‌ ಹಾಗೂ ‘ಫಾರ್ಮಸ್‌–2050’ ಮುಖ್ಯಸ್ಥ ಬಿ.ಎಂ.ಪಾಟೀಲ ಇದ್ದರು.
ಗೃಹ ಸಚಿವ ಎಂ.ಬಿ. ಪಾಟೀಲ, ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ, ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ, ಆ್ಯಮ್‌ಹೈಡ್ರೊ ಕಂಪನಿಯ ಸಿಇಒ ಜೆನ್ನಿ ಹ್ಯಾರಿಸ್‌, ತಾಂತ್ರಿಕ ನಿರ್ದೇಶಕ ಜೋ ಸ್ಪಾರ್ಟ್ಸ್‌ ಹಾಗೂ ‘ಫಾರ್ಮಸ್‌–2050’ ಮುಖ್ಯಸ್ಥ ಬಿ.ಎಂ.ಪಾಟೀಲ ಇದ್ದರು.   

ಬೆಂಗಳೂರು: ‘ರೈತರ ಸಾಲ ಮನ್ನಾ ಮಾಡಿ ಋಣಮುಕ್ತರನ್ನಾಗಿ ಮಾಡುವ ಬದಲಿಗೆ ಅವರನ್ನು ಸುಸ್ಥಿರ ಮತ್ತು ಆರ್ಥಿಕವಾಗಿ ಸದೃಢ ಕೃಷಿಕರನ್ನಾಗಿ ರೂಪಿಸುವ ಅಗತ್ಯವಿದೆ’ ಎಂದು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟರು.

ಮಂಗಳವಾರ ನಗರದಲ್ಲಿ ನಡೆದ ಹೈಡ್ರೊಪೊನಿಕ್‌ (ಮಣ್ಣು ರಹಿತ ಜಲಕೃಷಿ ಪದ್ಧತಿ) ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ನಗರದ ’ಫಾರ್ಮ್ಸ್‌–2015 ಮತ್ತು ಅಮೆರಿಕದ ಆ್ಯಮ್‌ಹೈಡ್ರೊ’ ಕಂಪನಿಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ದಿನೇ ದಿನೇ ಕೃಷಿಭೂಮಿ ಸಂಕುಚಿತವಾಗುತ್ತಿದ್ದು, ಭವಿಷ್ಯದಲ್ಲಿ ಊರ್ಧ್ವಮುಖಿ ಕೃಷಿಯತ್ತ ಗಮನ ಹರಿಸುವ ಅಗತ್ಯವಿದೆ. ನಗರೀಕರಣ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಹೈಡ್ರೊಪೊನಿಕ್‌ ಕೃಷಿ ತಂತ್ರಜ್ಞಾನ ರೈತರ ಪಾಲಿನ ಆಶಾಕಿರಣವಾಗಿದೆ’ ಎಂದರು.

ADVERTISEMENT

ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಮಾತನಾಡಿ, ‘ಕಡಿಮೆ ಸಂಪನ್ಮೂಲದ ಸೂಕ್ಷ್ಮ ಕೃಷಿ ಪದ್ಧತಿ ವೇಗವಾಗಿ ಬೆಳೆಯುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಹೈಡ್ರೊಪೊನಿಕ್‌ ಕೃಷಿ ಉತ್ತೇಜಿಸುವ ಅಗತ್ಯವಿದೆ’ ಎಂದರು.

ಫಾರ್ಮ್ಸ್‌–2050 ಕಂಪನಿಯ ಮುಖ್ಯಸ್ಥರಾದ ಬಿ.ಎಂ. ಪಾಟೀಲ ಅವರು, ‘ಮಧ್ಯಮ ವರ್ಗದ ಕೃಷಿಕರು ಆಧುನಿಕ ತಂತ್ರಜ್ಞಾನವನ್ನು ಸರಳವಾಗಿ ಬಳಸಿಕೊಳ್ಳುವತ್ತ ಮುಖ ಮಾಡಬೇಕು. ಭವಿಷ್ಯದಲ್ಲಿ ಎದುರಾಗಲಿರುವ ನೀರಿನ ಅಭಾವದಲ್ಲಿ, ಸುಲಭ ವಿಧಾನಗಳ ಮೂಲಕ ಹೇಗೆ ಕೃಷಿ ಮಾಡಬೇಕು ಎಂಬುದರತ್ತ ಹೆಚ್ಚಿನ ಗಮನ ಹರಿಸಬೇಕು’ ಎಂದರು.

ಆ್ಯಮ್‌ಹೈಡ್ರೊ ಕಂಪನಿಯ ಮುಖ್ಯ ಕಾರ್ಯನಿರ್ವಾಹಕಿ ಜೆನ್ನಿ ಹ್ಯಾರಿಸ್ ಮತ್ತು ತಾಂತ್ರಿಕ ನಿರ್ದೇಶಕ ಜೋ ಸ್ವಾರ್ಟ್ಸ್‌ ಪ್ರಶ್ನೋತ್ತರ ಸಂವಾದ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.