ADVERTISEMENT

ಪರೀಕ್ಷೆ ಮುಂದೂಡಲು ತೇಜಸ್ವಿ ಸೂರ್ಯ ಮನವಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 19:31 IST
Last Updated 17 ಡಿಸೆಂಬರ್ 2020, 19:31 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಡಿ.21 ಮತ್ತು 24ರಂದು ನಡೆಸಲು ಉದ್ದೇಶಿಸಿರುವ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಗಳ ಪರೀಕ್ಷೆಯನ್ನು ಮುಂದೂಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಆಯೋಗದ ಅಧ್ಯಕ್ಷ ಷಡಕ್ಷರಿ ಸ್ವಾಮಿಯವರಿಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ‘ಡಿ.22ರಂದು ಗ್ರಾಮ ಪಂಚಾಯಿತಿ ಚುನಾವಣೆಗಳು ನಿಗದಿಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಇದರಿಂದ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹೋಗಬೇಕಾಗುತ್ತದೆ. ಅಭ್ಯರ್ಥಿಗಳು ಮತ್ತು ಸರ್ಕಾರಿ ನೌಕರರು ಮತದಾನದಿಂದಲೂ ವಂಚಿತರಾಗಬೇಕಾಗುತ್ತದೆ ಎಂದು ಹಲವು ಅಭ್ಯರ್ಥಿಗಳು ಹೇಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳೂ ನಿಗದಿಯಾಗಿರುವುದನ್ನು ಗಮನಕ್ಕೆ ತಂದಿದ್ದಾರೆ’ ಎಂದಿರುವ ಅವರು, ಪರೀಕ್ಷೆಯನ್ನು ಮುಂದೂಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT