ADVERTISEMENT

ರಾಮಯ್ಯ: ಇಂದು ಅಂಚೆ ಚೀಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 21:20 IST
Last Updated 21 ಏಪ್ರಿಲ್ 2022, 21:20 IST
ಎಂ.ಎಸ್‌.ರಾಮಯ್ಯ
ಎಂ.ಎಸ್‌.ರಾಮಯ್ಯ   

ಬೆಂಗಳೂರು: ಎಂ.ಎಸ್‌.ರಾಮಯ್ಯನವರ ಜನ್ಮಶತಮಾನೋತ್ಸವದ ಪ್ರಯುಕ್ತ ಕರ್ನಾಟಕ ಅಂಚೆ ಇಲಾಖೆಯು ವಿಶೇಷ ಅಂಚೆ ಚೀಟಿ ಹಾಗೂ ಅಂಚೆ ಲಕೋಟೆ ಹೊರತಂದಿದ್ದು, ಅದರ ಬಿಡುಗಡೆ ಇದೇ 22ರಂದು ನಡೆಯಲಿದೆ.

‘ನಗರದ ಪ್ರಧಾನ ಅಂಚೆ ಕಚೇರಿಯ (ಜಿಪಿಒ) ಮೇಘದೂತ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್‌ ಪೋಸ್ಟ್‌ಮಾಸ್ಟರ್ ಜನರಲ್‌ ಎಸ್‌.ರಾಜೇಂದ್ರ ಕುಮಾರ್‌ ಅವರು ಅಂಚೆ ಚೀಟಿ ಹಾಗೂ ಲಕೋಟೆ ಬಿಡುಗಡೆ ಮಾಡಲಿದ್ದಾರೆ. ನಗರ ಪ್ರಧಾನ ಅಂಚೆ ಕಚೇರಿಯ ಪೋಸ್ಟ್‌ಮಾಸ್ಟರ್‌ ಜನರಲ್‌ ಎಲ್‌.ಕೆ.ದಾಸ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

‘ವಿಶೇಷ ಅಂಚೆ ಲಕೋಟೆಯು ನಗರದ ಪ್ರಧಾನ ಅಂಚೆ ಕಚೇರಿ, ಮಂಗಳೂರು, ಮೈಸೂರು, ಬೆಳಗಾವಿಯ ಕೇಂದ್ರ ಕಚೇರಿ ಹಾಗೂ ಇ–ಅಂಚೆ ಕಚೇರಿಯಲ್ಲಿ ಲಭ್ಯವಿರಲಿದೆ’ ಎಂದು ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.