ವೈಟ್ಫೀಲ್ಡ್:ನಗರದ ವೈಟ್ಫೀಲ್ಡ್ನ ಶಾಂತಿನಿಕೇತನ ಅಪಾರ್ಟ್ಮೆಂಟ್ ಸಮುಚ್ಛಯದಲ್ಲಿ ಗಣೇಶೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.
ಸೂರ್ಯನ ರಥದ ಮಾದರಿಯಲ್ಲಿ ಕುಳಿತ ವಿಘ್ನ ವಿನಾಯಕನ ಮೆರವಣಿಗೆ ಮುಖ್ಯರಸ್ತೆಯಲ್ಲಿ ಬರುತ್ತಿದ್ದರೆ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಹಾಡು–ನೃತ್ಯದೊಂದಿಗೆ ಸ್ವಾಗತಿಸಿದರು.ಎಲ್ಲ ರಾಜ್ಯಗಳ ಜನರು ಇಲ್ಲಿ ವಾಸಿಸುತ್ತಿರುವುದರಿಂದ ವಿವಿಧ ಸಂಸ್ಕೃತಿಯ ನೃತ್ಯ
ರೂಪಕಗಳನ್ನು ಕಣ್ತುಂಬಿಕೊಳ್ಳಲು ಸಾಧ್ಯವಾಯಿತು.
ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಪಂಜಾಬ್, ಅಸ್ಸಾಂ, ಪಶ್ಚಿಮ ಬಂಗಾಳ, ರಾಜಸ್ಥಾನ ಮುಂತಾದ ರಾಜ್ಯಗಳ ನಿವಾಸಿಗಳು ಆಯಾ ರಾಜ್ಯಗಳ ಉಡುಗೆ ತೊಡುಗೆಗಳನ್ನು ತೊಟ್ಟು ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದ್ದು ವಿನಾಯ
ಕನ ಹಬ್ಬಕ್ಕೆ ಮತ್ತಷ್ಟು ಮೆರಗು ತಂದುಕೊಟ್ಟಿತ್ತು. ರಾಜ್ಯದ ಡೊಳ್ಳು ಕುಣಿತ, ಪೂಜಾ ಕುಣಿತ ಸೇರಿದಂತೆ ಪಂಜಾಬ್ ಮತ್ತು ಅಸ್ಸಾಂನ
ನೃತ್ಯ ಪ್ರದರ್ಶನ ಕಣ್ಮನ ಸೆಳೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.