ಬೆಂಗಳೂರು: ಡಿ.ಜೆ ಹಳ್ಳಿ ಠಾಣಾ ವ್ಯಾಪ್ತಿಯ ಶಾಂಪುರ ರೈಲ್ವೆ ಗೇಟ್ ಬಳಿ ಫೆ. 26ರಂದು ನಡೆದ ಆಟೊ ಚಾಲಕ ವಿನೋದ್ (32) ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವಿಶಾಖಪಟ್ಟಣದ ಜೈರಾಜ್ ಮತ್ತು ನಾರಾಯಣಗೌಡ ಬಂಧಿತರು. ಪ್ರಕರಣದಲ್ಲಿ ಮೃತ ವಿನೋದ್ನ ಪತ್ನಿ ಅನಿತಾಳ ಪಾತ್ರದ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ತಿಳಿಸಿದರು.
ಅನಿತಾಳನ್ನು 12 ವರ್ಷಗಳ ಹಿಂದೆ ವಿನೋದ್ ಮದುವೆಯಾಗಿದ್ದ. ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಈ ಕಾರಣಕ್ಕೆ ಪತಿಯನ್ನು ತೊರೆದು ತವರು ಸೇರಿದ್ದ ಅನಿತಾ, ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದಳು. ಈ ವೇಳೆ ಪರಿಚಯವಾಗಿದ್ದ ನಾರಾಯಣಗೌಡನ ಜೊತೆ ಆಕೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ವಿನೋದ್ ದೂರು ನೀಡಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.