
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮನೆಯಲ್ಲಿ ನಿತ್ಯ ನಡೆಯುತ್ತಿದ್ದ ಗಲಾಟೆಯಿಂದ ಬೇಸತ್ತು ಪತಿಯನ್ನು ಕೊಲೆ ಮಾಡಿದ್ದ ಪತ್ನಿಯನ್ನು ಬೊಮ್ಮನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸುರೇಶ್ ಬಾಬು (48) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಆರೋಪದ ಅಡಿ ಅವರ ಪತ್ನಿ ನಾಗಮ್ಮ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ವ್ಯಕ್ತಿಯ ಸಹೋದರ ಸುದರ್ಶನ್ ನೀಡಿದ ದೂರು ಆಧರಿಸಿ ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ನಡೆಸಿದಾಗ ಪತ್ನಿಯೇ ಕೊಲೆ ನಡೆಸಿದ್ದು ಗೊತ್ತಾಗಿತ್ತು ಎಂದು ಪೊಲೀಸರು ಹೇಳಿದರು.
‘ಏಳು ವರ್ಷದ ಹಿಂದೆ ಇಬ್ಬರೂ ಮದುವೆ ಆಗಿದ್ದರು. ಮನೆಯಲ್ಲಿ ನಿತ್ಯ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.