ಬೆಂಗಳೂರು: ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸಮರ್ಥ್ ಕೊಲೆ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್, ಅರುಣ್ ಹಾಗೂ ರಾಕೇಶ್ ಬಂಧಿತರು.
‘ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿ ಕಿರಣ್, ಸಹೋದ್ಯೋಗಿ ಯುವತಿಯನ್ನು ಪ್ರೀತಿಸುತ್ತಿದ್ದ. ಸಲುಗೆ ಬೆಳೆಯುತ್ತಿದ್ದಂತೆ ವಿನಾಕಾರಣ ಸಂಶಯಪಟ್ಟು ಯುವತಿಗೆ ಕಿರುಕುಳ ನೀಡಲಾರಂಭಿಸಿದ್ದ. ಬೇಸತ್ತ ಯುವತಿ, ಆತನಿಂದ ದೂರವಾಗಿದ್ದಳು. ಸಮರ್ಥ್ ಅವರನ್ನು ಪ್ರೀತಿಸಲಾರಂಭಿಸಿದ್ದಳು’ ಎಂದು ಪೊಲೀಸರು ಹೇಳಿದರು.
‘ಸಮರ್ಥ್ ಮೇಲೆ ಸಿಟ್ಟಾಗಿದ್ದ ಕಿರಣ್, ಹಲವು ಬಾರಿ ಗಲಾಟೆ ಮಾಡಿ ಎಚ್ಚರಿಕೆ ನೀಡಿದ್ದ. ಅದಕ್ಕೆಲ್ಲ ಸಮರ್ಥ್ ತಲೆಕೆಡಿಸಿಕೊಂಡಿರಲಿಲ್ಲ. ಮೇ 7ರಂದು ಸಮರ್ಥ್ ಜೊತೆ ಜಗಳ ತೆಗೆದು ಹಲ್ಲೆ ಮಾಡಿದ್ದ ಕಿರಣ್, ತಲೆಯನ್ನು ಗೋಡೆಗೆ ಚಚ್ಚಿ ಕೊಲೆ ಮಾಡಿದ್ದ. ಇದಕ್ಕೆ ಸಹಚರರು ಸಹಕಾರ ನೀಡಿದ್ದರು’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.