ADVERTISEMENT

ಕೊಲೆ ಪ್ರಕರಣ: ಒಂದೂವರೆ ಕೆ.ಜಿ ಚಿನ್ನದ ಸಮೇತ ಮತ್ತೊಬ್ಬ ಬಂಧನ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 17:22 IST
Last Updated 19 ಜೂನ್ 2022, 17:22 IST
   

ಬೆಂಗಳೂರು: ಚಿಕ್ಕಪೇಟೆಯಲ್ಲಿರುವ ‘ದೀಪಂ ಎಲೆಕ್ಟ್ರಿಕಲ್ಸ್‌’ ಮಳಿಗೆ ಮಾಲೀಕ ಜುಗರಾಜ್‌ ಜೈನ್‌ (74) ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿ ಓಂರಾಮ್ ದೇವಸಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಜುಗರಾಜ್ ಅವರನ್ನು ಮೇ 24 ರಂದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಕೆಲಸಗಾರ ಬಿಜರಾಮ್ (24), ಈತನ ಸ್ನೇಹಿತರಾದ ಪೂರನ್ ರಾಮ್ ದೇವಸಿ (26) ಹಾಗೂ ಮಹೇಂದ್ರ ದೇವಸಿಯನ್ನು (27) ಈ ಹಿಂದೆಯೇ ಬಂಧಿಸಲಾಗಿತ್ತು. ಇದೀಗ ಓಂರಾಮ್‌ನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಕೊಲೆ ಬಳಿಕ ಚಿನ್ನಾಭರಣ ಸಮೇತ ಪರಾರಿಯಾಗಿದ್ದ ಓಂರಾಮ್, ರಾಜಸ್ಥಾನ್‌ದಲ್ಲಿ ತಲೆಮರೆಸಿಕೊಂಡಿದ್ದ. ಆತನ ವಿಳಾಸ ಪತ್ತೆ ಮಾಡಿದ್ದ ವಿಶೇಷ ತಂಡ, ರಾಜಸ್ಥಾನಕ್ಕೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ. ಈತನಿಂದ ಒಂದೂವರೆ ಕೆ.ಜಿ ಚಿನ್ನಾಭರಣ ಹಾಗೂ ₹ 16 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.