ಬೆಂಗಳೂರು: ‘ನಾನು ನಿನ್ನನ್ನು ಪ್ರೀತಿಸುತ್ತಿದ್ದು, ಬೇರೆಯವರೊಂದಿಗೆ ಮಾತನಾಡಿದರೆ ಕೊಲೆ ಮಾಡುವೆ’ ಎಂದು ಹೇಳಿ ಯುವಕನೊಬ್ಬ 20ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ನಡುಬೀದಿಯಲ್ಲೇ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ವಿಜಯನಗರದಲ್ಲಿ ಸೋಮವಾರ ಸಂಜೆ ನಡೆದಿದೆ.
ಯುವಕನಿಂದ ಹಲ್ಲೆಗೊಳಗಾದ ವಿದ್ಯಾರ್ಥಿನಿಯನ್ನು ಕವಿತಾ ಪಿ. ಎಂದು ಗುರುತಿಸಲಾಗಿದೆ. ಸರ್ಕಾರಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿ.ಕಾಂ ಓದುತ್ತಿದ್ದ ಕವಿತಾ, ಪರೀಕ್ಷೆ ಪ್ರವೇಶ ಪತ್ರ ಪಡೆದು
ದ್ವಿಚಕ್ರ ವಾಹನದಲ್ಲಿ ಹಿಂತಿರುಗುವಾಗ ಮನೆ ಸಮೀಪ ವಾಸವಾಗಿರುವ ರಘು ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕತ್ತಿನ ಎಡಭಾಗ, ಎಡಗೈ ಮತ್ತು ಹೊಟ್ಟೆ ಬಲಭಾಗಕ್ಕೆ ಇರಿದಿದ್ದಾನೆ. ಆರೋಪಿ ವಿರುದ್ಧ ಕೊಲೆ ಯತ್ನ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಯುವಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.