ADVERTISEMENT

ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 19:57 IST
Last Updated 14 ಜುಲೈ 2019, 19:57 IST

ಬೆಂಗಳೂರು: ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ಪೀಣ್ಯ ಪೊಲೀಸ್‌ ಠಾಣೆ ವ್ಯಾಪ್ತಿ ಶಿವಪುರ ಕೆರೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮೃತನನ್ನು ಸ್ಥಳೀಯ ನಿವಾಸಿ, ಗಾರ್ಮೆಂಟ್‌ ಕಾರ್ಮಿಕ ಕಿರಣ್‌ ಕುಮಾರ್‌ (26) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ಸ್ಥಳೀಯರು ಮೃತದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಸಪ್ತಗಿರಿ ಪೊಲೀಸ್‌ ಠಾಣೆಯಲ್ಲಿ ಇಡಲಾಗಿದೆ.

‘ಮೃತದೇಹ ಪತ್ತೆಯಾದ ಸ್ಥಳದಲ್ಲಿ ಬಿಯರ್‌ ಬಾಟಲಿಗಳು ಸಿಕ್ಕಿವೆ. ಪರಿಚಿತರೆಲ್ಲರೂ ಸೇರಿ ರಾತ್ರಿ ಪಾರ್ಟಿ ಮಾಡಿರಬೇಕು. ಈ ವೇಳೆ, ಜಗಳ ನಡೆದು ಕೊಲೆ ಮಾಡಿರುವ ಶಂಕೆ ಇದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.