ಬೆಂಗಳೂರು: ಮಾಗಡಿ ರಸ್ತೆ ಠಾಣೆ ವ್ಯಾಪ್ತಿಯಲ್ಲಿ ಸಿಗರೇಟ್ ವಿಚಾರಕ್ಕಾಗಿ ನಡೆದ ಜಗಳದಲ್ಲಿಪ್ರವೀಣ್ (28) ಎಂಬುವರನ್ನು ಕೊಲೆ ಮಾಡಲಾಗಿದ್ದು, ಆ ಸಂಬಂಧ ಐವರು ಸ್ನೇಹಿತರನ್ನು ಬಂಧಿಸಿದ್ದಾರೆ.
ರಾಜಾಜಿನಗರದ ಅರವಿಂದ, ವಿನಯ್, ಡೆನ್ನಿಸ್, ಮಾಧವ್ ಹಾಗೂಪ್ರಕಾಶ್ ಬಂಧಿತರು.
‘ಬಿಸಿಎ ಪದವೀಧರರಾದ ಪ್ರವೀಣ್, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಅವರು ಹಾಗೂ ಸ್ನೇಹಿತರು ಇದೇ 8ರಂದು ರಾತ್ರಿ ರಾಜಾಜಿನಗರದ ಕೈಗಾರಿಕಾ ಪ್ರದೇಶದ ಉದ್ಯಾನದಲ್ಲಿ ಸೇರಿದ್ದರು. ಸಿಗರೇಟ್ ಸೇದುವ ವಿಚಾರಕ್ಕಾಗಿ ಸ್ನೇಹಿತರ ನಡುವೆ ಗಲಾಟೆ ಶುರುವಾಗಿತ್ತು. ಆರೋಪಿಗಳು, ಪ್ರವೀಣ್ ತಲೆಗೆ ಹೊಡೆದು ಪರಾರಿಯಾಗಿದ್ದರು.’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.