ಬೆಂಗಳೂರು: ಕೆ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಅಸ್ಕರ್ (20) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
‘ಸ್ಥಳೀಯ ನಿವಾಸಿಯಾದ ಅಸ್ಕರ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದಾಗಲೇ ಅಡ್ಡಗಟ್ಟಿ ದಾಳಿ ಮಾಡಿದ್ದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಅಸ್ಕರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ’ ಎಂದು ಪೊಲೀಸರು ಹೇಳಿದರು.
‘ಕೊಲೆಯಾದ ಅಸ್ಕರ್ ಹಾಗೂ ಸ್ಥಳೀಯ ನಿವಾಸಿ ತಬ್ರೇಜ್ ಎಂಬಾತನ ನಡುವೆ ಇತ್ತೀಚೆಗಷ್ಟೇ ಜಗಳ ಆಗಿತ್ತು. ತಬ್ರೇಜ್, ಅಸ್ಕರ್ ಕಪಾಳಕ್ಕೆ ಹೊಡೆದಿದ್ದ. ಸ್ಥಳೀಯರು ಜಗಳ ಬಿಡಿಸಿದ್ದರು.’
‘ಕಪಾಳಕ್ಕೆ ಹೊಡೆದ ತಬ್ರೇಜ್ ನನ್ನು ಕೊಂದು ಸೇಡು ತೀರಿಸಿಕೊಳ್ಳುವುದಾಗಿ ಅಸ್ಕರ್ ಕೂಗಾಡಿದ್ದರು. ಸ್ನೇಹಿತರ ಬಳಿಯೂ ಆ ಬಗ್ಗೆ ಹೇಳಿಕೊಂಡಿದ್ದರು. ಈ ವಿಷಯ ಗೊತ್ತಾಗಿ ತಬ್ರೇಜ್ನೇ ತನ್ನ ಸಹಚರರ ಜೊತೆ ಸೇರಿ ಈ ಕೊಲೆ ಮಾಡಿರುವ ಅನುಮಾನವಿದೆ. ಆತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.