ADVERTISEMENT

ಡಿ.ಜೆ. ಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

​ಪ್ರಜಾವಾಣಿ ವಾರ್ತೆ
Published 30 ಮೇ 2020, 21:54 IST
Last Updated 30 ಮೇ 2020, 21:54 IST
   

ಬೆಂಗಳೂರು: ನಗರದ ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಭಾನ್ (30) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಸ್ಥಳೀಯ ನಿವಾಸಿಯಾದ ಸುಭಾನ್ ಅವರ ಮೃತದೇಹ ಶ್ಯಾಂಪುರ ರೈಲ್ವೆ ಗೇಟ್ ಬಳಿ‌ ಶನಿವಾರ ಪತ್ತೆಯಾಗಿದೆ.

‘ಮೃತ ಸುಭಾನ್ ಹಾಗೂ ಸೈಯದ್ ತಬ್ರೇಜ್ ನಡುವೆ ವೈಷಮ್ಯವಿತ್ತು. ಅವರಿಬ್ಬರ ನಡುವೆ ಹಲವು ಬಾರಿ ಗಲಾಟೆಯೂ ನಡೆದಿತ್ತು. ಈಗ ನಡೆದಿರುವ ಕೊಲೆಗೂ ತಬ್ರೇಜ್‌ಗೂ ಸಂಬಂಧವಿರುವ ಮಾಹಿತಿ ಇದೆ. ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ಹೇಳಿದರು.

ADVERTISEMENT

‘ಸುಭಾನ್ ಅವರ ಮುಖಕ್ಕೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ದುಷ್ಕರ್ಮಿಗಳು, ಮೃತದೇಹವನ್ನು ರೈಲ್ವೆ ಗೇಟ್ ಬಳಿ ಎಸೆದು ಹೋಗಿದ್ದಾರೆ’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.