ADVERTISEMENT

ಪತ್ನಿ ಹತ್ಯೆ ಪ್ರಕರಣ ತನಿಖೆ: ರೇವಂತ್‌ಗೆ ಪರಿಚಯದ ಯುವತಿ ನಗರದಲ್ಲಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 8:46 IST
Last Updated 23 ಫೆಬ್ರುವರಿ 2020, 8:46 IST
ಹರ್ಷಿತಾ
ಹರ್ಷಿತಾ   

ಬೆಂಗಳೂರು: ರಾಜರಾಜೇಶ್ವರಿ ನಗರ ಠಾಣೆ ವ್ಯಾಪ್ತಿಯ ಜವರೇಗೌಡ ನಗರದಲ್ಲಿ ಹರ್ಷಿತಾ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಎಂಟಿಸಿ ಚಾಲಕನ ಪತ್ನಿಯಾಗಿದ್ದ ಹರ್ಷಿತಾ ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದರು.

'ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ದಂತವೈದ್ಯ ರೇವಂತ್ ಫೆಬ್ರವರಿ 17ರಂದು ಪತ್ನಿ ಕವಿತಾಳನ್ನ ಕೊಲೆ ಮಾಡಿದ್ದ. ಪೊಲೀಸರು ತನ್ನನ್ನು ಬಂಧಿಸುತ್ತಾರೆ ಎಂದು ಹೆದರಿ ಶನಿವಾರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.

ADVERTISEMENT

ಅದರ ಬೆನ್ನಲ್ಲೇ ರೇವಂತ್‌ಗೆ ಪರಿಚಯವಿದ್ದ ಹರ್ಷಿತಾ ಸಹ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.