ಬೆಂಗಳೂರು: ನಗರದ ಹೊರವಲಯದ ನೈಸ್ ರಸ್ತೆ ಬಳಿ ರೌಡಿ ಸುನೀಲ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಶುಕ್ರವಾರ ರಾತ್ರಿ ಕೊಲೆ ಮಾಡಲಾಗಿದೆ.
ಮೃತ ಸುನೀಲ್, ತನ್ನ ಚಾಲಕನ ಜೊತೆ ಕಾರಿನಲ್ಲಿ ಹೊರಟಿದ್ದ. ಮಾರ್ಗಮಧ್ಯೆಯೇ ಅವರನ್ನು ತಡೆದಿದ್ದ ದುಷ್ಕರ್ಮಿಗಳ ತಂಡ, ಜಗಳ ತೆಗೆದು ಕೃತ್ಯ ಎಸಗಿ ಪರಾರಿಯಾಗಿದೆ.
‘ಮುಖವೇ ಗೋಚರಿಸದ ರೀತಿಯಲ್ಲಿ ಸುನೀಲ್ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಕ್ಷಣೆಗೆ ಹೋಗಿದ್ದ ಚಾಲಕನ ಮೇಲೂ ಹಲ್ಲೆ ಮಾಡಲಾಗಿದೆ. ಹಳೇ ವೈಷಮ್ಯವೇ ಇದಕ್ಕೆ ಕಾರಣವಿರುವ ಅನುಮಾನವಿದೆ’ ಎಂದು ಕುಂಬಳಗೋಡು ಠಾಣೆ ಪೊಲೀಸರು ಹೇಳಿದರು.
‘ಆರು ಜನ ದುಷ್ಕರ್ಮಿಗಳು ಸೇರಿ ಸುನೀಲ್ನನ್ನು ಕೊಲೆ ಮಾಡಿರುವ ಬಗ್ಗೆ ಮಾಹಿತಿ ಇದೆ. ಘಟನಾ ಸ್ಥಳದಲ್ಲಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.