ADVERTISEMENT

ಮಾಂಸದಂಗಡಿ ಮಾಲೀಕನ ಕೊಲೆ‍

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 17:08 IST
Last Updated 31 ಡಿಸೆಂಬರ್ 2020, 17:08 IST

ಬೆಂಗಳೂರು: ಕೆ.ಜಿ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಸುಲ್ತಾನ್ ಪಾಷಾ (25) ಎಂಬುವರನ್ನು ಮಾರಕಾಸ್ತ್ರಗಳಿಂದ ಹೊಡೆದು ಬುಧವಾರ ರಾತ್ರಿ ಕೊಲೆ ಮಾಡಲಾಗಿದೆ.

‘ಸ್ಥಳೀಯ ನಿವಾಸಿಯಾಗಿದ್ದ ಸುಲ್ತಾನ್ ಪಾಷಾ, ಮಾಂಸದಂಗಡಿ ಇಟ್ಟುಕೊಂಡಿದ್ದರು. ಹಳೇ ವೈಷಮ್ಯದಿಂದಾಗಿ ಕೊಲೆ ನಡೆದಿರುವ ಸಾಧ್ಯತೆ ಇದೆ. ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ರಾತ್ರಿ 10 ಗಂಟೆ ಸುಮಾರಿಗೆ ಟೆಂಟ್ ರಸ್ತೆಗೆ ಬಂದಿದ್ದ ಸುಲ್ತಾನ್‌ ಪಾಷಾ, ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಮಾತನಾಡಿಸುವ ಸೋಗಿನಲ್ಲಿ ಮಾರಕಾಸ್ತ್ರಗಳಿಂದ ಹೊಡೆದಿದ್ದರು.’

ADVERTISEMENT

‘ರಸ್ತೆಯಲ್ಲೇ ಕುಸಿದು ಬಿದ್ದು ನರಳುತ್ತಿದ್ದ ಸುಲ್ತಾನ್‌ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಅಸುನೀಗಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದೂ ಮೂಲಗಳು ಹೇಳಿವೆ.

‘ಗಲಾಟೆ ಸಂಬಂಧ 2014ರಲ್ಲಿ ಸುಲ್ತಾನ್ ಪಾಷಾ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.