ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವಿಜಯ ಕುಮಾರ್ (30) ಎಂಬುವರರನ್ನು ಕೊಲೆ ಮಾಡಲಾಗಿದೆ.
ರಾಜರಾಜೇಶ್ವರಿ ನಗರದ ಆರ್ಮುಗಂ ದೇವಾಲಯ ಸಮೀಪ ಘಟನೆ ನಡೆದಿದೆ.
ನಟ ಸುದೀಪ್ ಅಭಿಮಾನಿಗಳ ಬಳಗದಲ್ಲಿ ಸಕ್ರಿಯ ಸದಸ್ಯನಾಗಿದ್ದ ವಿಜಯ ಕುಮಾರ್ ಅವರನ್ನು ಶನಿವಾರ ತಡರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.