ಬೆಂಗಳೂರು: ಛಲವಾದಿಪಾಳ್ಯ ವಾರ್ಡ್ ಮಾಜಿ ಕಾರ್ಪೋರೇಟರ್ ಆರ್. ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಪ್ರಮುಖ ಆರೋಪಿಗಳಾದ ಪೀಟರ್ (46) ಹಾಗೂ ಸೂರ್ಯನನ್ನು (19) ಪೊಲೀಸರು ಗುಂಡು ಹಾರಿಸಿ ಶುಕ್ರವಾರ ಸೆರೆ ಹಿಡಿದಿದ್ದರು.
ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಸ್ಪೀಫನ್ (21), ಅಜಯ್ (21) ಹಾಗೂ ಪುರುಷೋತ್ತಮ್ನನ್ನು (22) ಬಂಧಿಸಿದ್ದಾರೆ.
'ಆರೋಪಿ ಪೀಟರ್ ಹಾಗೂ ಸೂರ್ಯ, ರೇಖಾ ಅವರಿಗೆ ಮಾರಕಾಸ್ತ್ರಗಳಿಂದ ಹೊಡೆದಿದ್ದರು. ಚಾಕುವಿನಿಂದ ಕತ್ತು ಕೊಯ್ದಿದ್ದರು.
ಇದನ್ನೂ ಓದಿ:ಮಾಜಿ ಕಾರ್ಪೋರೇಟರ್ ಹತ್ಯೆ: ಸಂಬಂಧಿಯೇ ಆರೋಪಿ
'ರೇಖಾ ಮೇಲೆ ಮಾರಕಾಸ್ತ್ರಗಳಿಂದ ಹೊಡೆಯುವ ವೇಳೆ ತಡೆಯಲು ಬಂದ ಸಾರ್ವಜನಿಕರ ಮೇಲೆ ಸ್ಟೀಫನ್ ಹಾಗೂ ಅಜಯ್ ಹಲ್ಲೆ ಮಾಡಿದ್ದರು. ಆರೋಪಿ ಪುರುಷೋತ್ತಮ್, ಹಲ್ಲೆ ನಡೆಸುವ ಮುನ್ನ ಸಿ.ಸಿ.ಟಿ.ವಿ ಕ್ಯಾಮೆರಾ ತಿರುಗಿಸಿದ್ದ' ಎಂದೂ ಪೊಲೀಸ್ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.