ADVERTISEMENT

ಮೆಟ್ರೋ ಹಸಿರು ಮಾರ್ಗದಲ್ಲಿ ಒಂದು ತಾಸು ಮೊದಲು ಸಂಚಾರ ಸ್ಥಗಿತ 

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 11:32 IST
Last Updated 17 ಸೆಪ್ಟೆಂಬರ್ 2020, 11:32 IST
ನಮ್ಮ ಮೆಟ್ರೋ
ನಮ್ಮ ಮೆಟ್ರೋ    

ಬೆಂಗಳೂರು:'ನಮ್ಮ ಮೆಟ್ರೊ' ಹಸಿರು ಮಾರ್ಗದ ಆರ್.ವಿ. ರಸ್ತೆ ನಿಲ್ದಾಣದಿಂದ ಯಲಚೇನಹಳ್ಳಿ‌ ನಿಲ್ದಾಣದವರೆಗೆ ಇದೇ ಶನಿವಾರ-ಭಾನುವಾರದಂದು ಒಂದು ತಾಸು ಮೊದಲೇ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಎರಡನೇ ಹಂತದಲ್ಲಿನ ಯಲಚೇನಹಳ್ಳಿ- ಅಂಜನಾಪುರ ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ಅಭಿವೃದ್ಧಿ ನಿಗಮ ಹೇಳಿದೆ.
ಈ ನಿಲ್ದಾಣಗಳ ನಡುವೆ ಶನಿವಾರ- ಭಾನುವಾರ ರಾತ್ರಿ 8 ಗಂಟೆಗೆ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಯಲಚೇನಹಳ್ಳಿ ನಿಲ್ದಾಣದಿಂದ ನಾಗಸಂದ್ರದವರೆಗೆ ಕೊನೆಯ ರೈಲು ಯಲಚೇನಹಳ್ಳಿಯಿಂದ ರಾತ್ರಿ 8ಕ್ಕೆ ಹೊರಡಲಿದೆ. ನಾಗಸಂದ್ರದಿಂದ ಕೊನೆಯ ರೈಲು ಸಂಜೆ 6.56ಕ್ಕೆ ಹೊರಡಲಿದೆ.

ADVERTISEMENT

ಆದರೆ, ಆರ್.ವಿ. ರಸ್ತೆ ಮತ್ತು ನಾಗಸಂದ್ರ ಮೆಟ್ರೊ‌ ನಿಲ್ದಾಣಗಳ ನಡುವೆ ಸೇವೆಯು ಎಂದಿನಂತೆ ರಾತ್ರಿ 9 ಗಂಟೆಯವರೆಗೆ ಲಭ್ಯವಿರುತ್ತದೆ. ಸೇವೆಯು ಎಂದಿನಂತೆ ಬೆಳಿಗ್ಗೆ 7 ಕ್ಕೆ ಪ್ರಾರಂಭವಾಗಲಿದೆ.

ನೇರಳೆ ಮಾರ್ಗದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ನಿಗಮ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.