
ಪ್ರಜಾವಾಣಿ ವಾರ್ತೆ
‘ನಮ್ಮ ಮೆಟ್ರೊ’ದ ಹಸಿರು ಮಾರ್ಗ
ಬೆಂಗಳೂರು: ಹಸಿರು ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಣೆ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿ ಭಾನುವಾರ ಪೂರ್ಣಗೊಂಡಿದ್ದು, ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ನಾಗಸಂದ್ರ– ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವಿನ ಮೆಟ್ರೊ ರೈಲು ಸಂಚಾರ ಸೋಮವಾರ ಪುನರಾರಂಭಗೊಳ್ಳಲಿದೆ.
ಈ ಮಾರ್ಗದಲ್ಲಿ ಎಲೆಕ್ಟ್ರಿಕ್ ಕೆಲಸಗಳನ್ನು ಜ.26ರಿಂದ ಹಮ್ಮಿಕೊಳ್ಳಲಾಗಿತ್ತು. ಅದಕ್ಕಾಗಿ ಹಸಿರುಮಾರ್ಗದಲ್ಲಿ ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರವರೆಗೆ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.