ಬೆಂಗಳೂರು: ಮಾಗಡಿ ರಸ್ತೆಯ ಮೆಟ್ರೊ ನಿಲ್ದಾಣದಲ್ಲಿ ಒಂದು ರೈಲಿನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಬೆಳಿಗ್ಗೆ 9 ಗಂಟೆ 10 ನಿಮಿಷದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿತ್ತು. ಆದ್ದರಿಂದ ಬೈಯಪ್ಪನಹಳ್ಳಿ –ಕೆಂಗೇರಿ ಮಾರ್ಗದಲ್ಲಿ 1 ಗಂಟೆ 20 ನಿಮಿಷಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು.
ವಿಜಯನಗರ, ಮೆಜೆಸ್ಟಿಕ್, ಎಂ.ಜಿ. ರಸ್ತೆಯಲ್ಲಿ ಸೇರಿ ಕೆಲ ನಿಲ್ದಾಣಗಳಲ್ಲಿ ರೈಲುಗಳನ್ನು ನಿಲ್ಲಿಸಲಾಗಿತ್ತು. ತಾಂತ್ರಿಕ ತೊಂದರೆಯನ್ನು ಪೂರ್ಣಗೊಳಿಸಿ 10 ಗಂಟೆ 30 ನಿಮಿಷದ ವೇಳೆಗೆ ರೈಲುಗಳ ಸಂಚಾರ ಸಹಜಗೊಂಡಿತು ಎಂದು ಬಿಎಂಆರ್ಸಿಎಲ್(ಬೆಂಗಳೂರು ಮೆಟ್ರೊ ರೈಲು ನಿಗಮ) ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.