ಬೆಂಗಳೂರು: ನಾರಾಯಣ ಶಿಕ್ಷಣ ಸಂಸ್ಥೆಗಳ ಅಂತರ ಶಾಲಾ ಕ್ರೀಡೋತ್ಸವ – ‘ನಾರಾಯಣ ಇಂಟ್ರಾ’ದ ಅಂತಿಮ ಸ್ಪರ್ಧೆ ‘ಖೇಲೋತ್ಸವ – 2019’ ಇದೇ 11ರಂದು ಬೆಳಿಗ್ಗೆ ಜಯನಗರ 1ನೇ ಬ್ಲಾಕ್ನ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮೂರು ತಿಂಗಳುಗಳಿಂದ ವಿವಿಧ ಹಂತಗಳಲ್ಲಿ ನಡೆದ ಕ್ರೀಡಾಕೂಟದ ವಿಜೇತರು ಅಂದು ನಡೆಯಲಿರುವ ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಶಾಸಕರಾದ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ ಮತ್ತು ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಸುಮಾರು 5 ಸಾವಿರ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.