ಬೆಂಗಳೂರು: ನಾರಾಯಣ ನೇತ್ರಾಲಯದ ಅಧ್ಯಕ್ಷರಾಗಿ ರೋಹಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ಸಂಸ್ಥಾಪನಾಧ್ಯಕ್ಷ ಡಾ. ಭುಜಂಗ ಶೆಟ್ಟಿ ಅವರು ಮೇ 19ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಸ್ಪತ್ರೆಯ ಉಪಾಧ್ಯಕ್ಷರಾಗಿದ್ದ ರೋಹಿತ್ ಶೆಟ್ಟಿ ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ಭುಜಂಗ ಶೆಟ್ಟಿ ಅವರ ಅಳಿಯ.
‘ಡಾ. ಭುಜಂಗ ಶೆಟ್ಟಿ ಅವರು ಹಾಕಿಕೊಟ್ಟ ಮೌಲ್ಯಗಳು ಮತ್ತು ತತ್ವಗಳನ್ನು ಎತ್ತಿ ಹಿಡಿಯಲಾಗುವುದು. ಆಸ್ಪತ್ರೆಯು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಾಗುವುದು. ಸಮಾಜದ ಎಲ್ಲಾ ವರ್ಗದವರಿಗೆ ಅತ್ಯುತ್ತಮ ಗುಣಮಟ್ಟದ ಕಣ್ಣಿನ ಆರೈಕೆ ಸೇವೆ ಒದಗಿಸಲಾಗುವುದು’ ಎಂದು ಡಾ. ರೋಹಿತ್ ಶೆಟ್ಟಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.