ADVERTISEMENT

ಹಾರದ ರಾಷ್ಟ್ರಧ್ವಜ: ಮುಖ್ಯಮಂತ್ರಿ ಸಮ್ಮುಖದಲ್ಲೇ ಗೊಂದಲ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 19:48 IST
Last Updated 26 ಜನವರಿ 2023, 19:48 IST
ಬೆಂಗಳೂರಿನ ಬ್ರಿಗೇಡ್‌ ರಸ್ತೆಯ ಒಪೇರಾ ಹೌಸ್‌ ಬಳಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಲು ಶಾಸಕ ಎನ್‌.ಎ. ಹ್ಯಾರಿಸ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯತ್ನಿಸಿದರು
ಬೆಂಗಳೂರಿನ ಬ್ರಿಗೇಡ್‌ ರಸ್ತೆಯ ಒಪೇರಾ ಹೌಸ್‌ ಬಳಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಲು ಶಾಸಕ ಎನ್‌.ಎ. ಹ್ಯಾರಿಸ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯತ್ನಿಸಿದರು   

ಬೆಂಗಳೂರು: ನಗರದ ಬ್ರಿಗೇಡ್‌ ರಸ್ತೆಯ ಒಪೇರಾ ಹೌಸ್‌ ಬಳಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ಹಾರದೆ ಗೊಂದಲ ಸೃಷ್ಟಿಸಿತು. ಇದೇ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯನ್ನು ಎರಡು ಬಾರಿ ಹಾಡಲಾಯಿತು.

ಶಾಂತಿನಗರ ಕ್ಷೇತ್ರದ ಶಾಸಕ ಎನ್‌.ಎ. ಹ್ಯಾರಿಸ್‌ ಅವರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿದ್ದರು.

ಎತ್ತರದ ಸ್ತಂಭದ ಮೇಲೆ 24*36 ಅಡಿ ವಿಸ್ತೀರ್ಣದ ಧ್ವಜವನ್ನು ಹಾರಿಸಲು ಉದ್ದೇಶಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿ ಧ್ವಜಾರೋಹಣಕ್ಕೆ ಮುಂದಾದರು. ಹಲವು ಬಾರಿ ಎಳೆದರೂ ರಾಷ್ಟ್ರಧ್ವಜ ಬಿಚ್ಚಿಕೊಳ್ಳಲಿಲ್ಲ. ಸ್ಥಳದಲ್ಲಿದ್ದ ಹಲವರು ಸಹ ಮುಂದಾಗಿ ಹಗ್ಗವನ್ನು ಎಷ್ಟು ಜಗ್ಗಿದರೂ ಧ್ವಜ ಹಾರಲೇ‌ ಇಲ್ಲ.

ADVERTISEMENT

ಕೊನೆಗೆ ಧ್ವಜ ಸ್ತಂಭದ ಸಿಬ್ಬಂದಿ ಆಗಮಿಸಿ ಹ್ಯಾಂಡಲ್‌ ಮೂಲಕ ಧ್ವಜವನ್ನೇ ಕೆಳಗೆ ಇಳಿಸಿದರು. ಕೆಳಭಾಗದಲ್ಲೇ ಧ್ವಜವನ್ನು ಬಿಚ್ಚಿ ನಂತರ ಮೇಲೇರಿಸಲಾಯಿತು. ಅಷ್ಟು ಹೊತ್ತಿಗೆ ಸುಮಾರು 15 ನಿಮಿಷ ವ್ಯಯವಾಯಿತು.

ಧ್ವಜಾರೋಹಣದ ನಂತರ ರಾಷ್ಟ್ರಗೀತೆಗೂ ಆಯೋಜಕರು ಸಿದ್ಧತೆ ಮಾಡಿಕೊಂಡಿರಲಿಲ್ಲ. ರಾಷ್ಟ್ರಗೀತೆ ಆರಂಭವಾದ ಕೆಲ ಹೊತ್ತಿನಲ್ಲಿ ಮೊಟಕುಗೊಳಿಸಲಾಯಿತು. ಬಳಿಕ ಎರಡನೇ ಬಾರಿ ಪೂರ್ಣವಾಗಿ ರಾಷ್ಟ್ರಗೀತೆಯನ್ನು ಹಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.