ಬೆಂಗಳೂರು: ನೆಲಮಂಗಲ ನಗರಸ ಭೆಯ ನೂತನ ಅಧ್ಯಕ್ಷೆಯಾಗಿ ಜೆಡಿಎಸ್ನ ಲತಾ ಹೇಮಂತಕುಮಾರ್, ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ನ ಸುಜಾತಾ ಮುನಿಯಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಿತ್ತು. ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು
ಹಾಗೂ ಸದಸ್ಯರು ವಿಜಯೋತ್ಸವ ಆಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಲತಾ ಹೇಮಂತಕುಮಾರ್, ‘23 ಸದಸ್ಯರ ಮೂರು ವರ್ಷಗಳ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ’ ಎಂದರು.
ಉಪ ವಿಭಾಗಾಧಿಕಾರಿ ತೇಜಸ್, ತಹಶೀಲ್ದಾರ್ ಕೆ.ಮಂಜುನಾಥ್, ಹೆಚ್ಚುವರಿ ತಹಶೀಲ್ದಾರ್ ಪ್ರಕಾಶ್, ಪೌರಾಯುಕ್ತ ರಾಜಶೇಖರ್ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.