ADVERTISEMENT

ನೆಲಮಂಗಲ‌ ನಗರಸಭೆ ಅಧ್ಯಕ್ಷೆ, ಜೆಡಿಎಸ್‌ನ 11 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ನೆಲಮಂಗಲ ನಗರಸಭೆಯಲ್ಲಿ ಅಧಿಕಾರ ಕಳೆದುಕೊಂಡ ಜೆಡಿಎಸ್

​ಪ್ರಜಾವಾಣಿ ವಾರ್ತೆ
Published 20 ಜನವರಿ 2023, 6:25 IST
Last Updated 20 ಜನವರಿ 2023, 6:25 IST
   

ಬೆಂಗಳೂರು: ನೆಲಮಂಗಲ ನಗರಸಭೆಯ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್ ಸೇರಿದಂತೆ ಜೆಡಿಎಸ್ ನ 11 ಸದಸ್ಯರು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಎಲ್ಲರೂ ಕಾಂಗ್ರೆಸ್ ಸೇರಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮತ್ತು ಕೆಪಿಸಿಸಿ ಸದಸ್ಯ ‌ಎನ್. ಶ್ರೀನಿವಾಸ್ ಉಪಸ್ಥಿತರಿದ್ದರು.

ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ 14 ಸದಸ್ಯರನ್ನು ಹೊಂದಿತ್ತು. 11 ಸದಸ್ಯರ ಪಕ್ಷಾಂತರದೊಂದಿಗೆ ಈಗ ಮೂವರಷ್ಟೇ ಜೆಡಿಎಸ್ ನಲ್ಲಿ ಉಳಿದುಕೊಂಡಿದ್ದಾರೆ. ಇದರೊಂದಿಗೆ ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದೆ.

ADVERTISEMENT

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದವರು: ಲತಾ ಹೇಮಂತ್ ಕುಮಾರ್, .ರಾಜಮ್ಮ ಪಿಳ್ಳಪ್ಪ, ಆನಂದ್, ಆಂಜಿನಪ್ಪ, ಅಂಜನಮೂರ್ತಿ( ಪಾಪಣಿ), ದಾಕ್ಷಾಯಿಣಿ ರವಿ ಕುಮಾರ್, ಪ್ರಸಾದ್, ಚೇತನ್, ಪುಷ್ಪಲತಾ ಮಾರೇಗೌಡ, ಭಾರತಿ ಬಾಯಿ ನಾರಾಯಣ್ ರಾವ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.