ಬೆಂಗಳೂರು: ‘ವಿದೇಶಗಳಿಂದ ತೈಲ ಆಮದು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೂತನ ಇಂಧನ ತಂತ್ರಜ್ಞಾನ ಅಭಿವೃದ್ದಿಪಡಿಸುತ್ತಿದೆ’ ಎಂದು ಮುಂಬೈನ ರಾಸಾಯನಿಕ ತಾಂತ್ರಿಕ ಸಂಸ್ಥೆಯ ಪ್ರಾಧ್ಯಾಪಕ ಜಿ.ಡಿ. ಯಾದವ್ ಹೇಳಿದರು.
ನಗರದಲ್ಲಿ ಗುರುವಾರ ಕೇಂದ್ರೀಯ ವಿದ್ಯುತ್ ಸಂಶೋಧನಾ ಸಂಸ್ಥೆಯ (ಸಿಪಿಆರ್ಐ) ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪೆಟ್ರೋಲ್, ಡೀಸೆಲ್ಗಿಂತ ನವೀಕರಿಸಹುದಾದ ಶಕ್ತಿ ಸಂಪನ್ಮೂಲಗಳ ಬಳಕೆಯ ಅಗತ್ಯತೆ ಹೆಚ್ಚಿದೆ’ ಎಂದರು.‘2040ರ ವೇಳೆಗೆ ಜಲಜನಕದಿಂದ ಶುದ್ಧ ಇಂಧನವನ್ನು ಪಡೆಯಬಹುದಾಗಿದೆ. ಸೌರವಿದ್ಯುತ್ಗೆ ಪರ್ಯಾಯವಾಗಿ ಈ ಇಂಧನದಿಂದ ವಿದ್ಯುತ್ ಪಡೆಯುವ ನಿಟ್ಟಿನಲ್ಲಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದರು.
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೋ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.