ADVERTISEMENT

ಸ್ವಾತಂತ್ರ್ಯ ದಿನಾಚರಣೆ: ವಿಶಿಷ್ಟ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 2:02 IST
Last Updated 16 ಆಗಸ್ಟ್ 2021, 2:02 IST

ಕೆ.ಆರ್.ಪುರ: ಸ್ವಾತಂತ್ರ್ಯ ದಿನದ ಅಂಗವಾಗಿಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಅಸೋಸಿಯೇಷನ್ ವತಿಯಿಂದ ಮೇಡಹಳ್ಳಿಯ ಎಲೆಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ದೋಣಿ ಓಡಿಸುವ ಸ್ಪರ್ಧೆಯನ್ನು ಭಾನುವಾರ ಆಯೋಜಿಸಲಾಗಿತ್ತು.

ಸ್ಪರ್ಧೆಗೆ ಬಿಜೆಪಿ ಮುಖಂಡ ಬಿ.ಎನ್.ಜಯಪ್ರಕಾಶ್ ಚಾಲನೆ ನೀಡಿದರು.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಕ್ಯಾನೋಯಿಂಗ್, ಕಯಾಕಿಂಗ್, ರೋಯಿಂಗ್ ಪಟುಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ADVERTISEMENT

ಕ್ಯಾಪ್ಟನ್ ದಿಲೀಪ್ ಕುಮಾರ್, ದೇವಯ್ಯ, ಆನಂತರಾಜು, ರಾಮರತ್ಮಮ್ಮ, ಪ್ರಶಾಂತ್ ಕೋರೆ, ಅಯ್ಯಪ್ಪ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.