ADVERTISEMENT

‘ಸುರಕ್ಷಿತ ನಗರ’ ಗುತ್ತಿಗೆ ಜಟಾಪಟಿ; ರೂಪಾ, ನಿಂಬಾಳ್ಕರ್‌ ಎತ್ತಂಗಡಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 19:24 IST
Last Updated 31 ಡಿಸೆಂಬರ್ 2020, 19:24 IST
 ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್
ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್    

ಬೆಂಗಳೂರು: ನಿರ್ಭಯಾ ನಿಧಿಯಡಿ ರೂಪಿಸಲಾದ ‘ಸುರಕ್ಷಿತ ನಗರ’ ಯೋಜನೆ ಗುತ್ತಿಗೆ ವಿಚಾರವಾಗಿ ಜಟಾಪಟಿ ನಡೆಸಿದ್ದ ಐಪಿಎಸ್ ಅಧಿಕಾರಿಗಳಾದ ಡಿ. ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ಹುದ್ದೆಯಿಂದ ಎತ್ತಂಗಡಿ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಗೃಹ ಇಲಾಖೆ ಕಾರ್ಯದರ್ಶಿ ಆಗಿದ್ದ ರೂಪಾ ಅವರನ್ನು ರಾಜ್ಯ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

‘ಗುತ್ತಿಗೆ ಹಂಚಿಕೆಯಲ್ಲಿ ಅಕ್ರಮ ನಡೆದಿದೆ’ ಎನ್ನಲಾದ ಯೋಜನೆಯ ಟೆಂಡರ್ ಆಹ್ವಾನ ಸಮಿತಿ ಅಧ್ಯಕ್ಷರೂ ಆಗಿದ್ದ ಬೆಂಗಳೂರು ನಗರ ಹೆಚ್ಚುವರಿ ಕಮಿಷನರ್ (ಆಡಳಿತ) ಹೇಮಂತ್ ನಿಂಬಾಳ್ಕರ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ADVERTISEMENT

ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಹಾಗೂ ತುರ್ತು ಸೇವಾ ನಿಯಂತ್ರಣ ಕೊಠಡಿ ನಿರ್ಮಾಣ ಸೇರಿ ವಿವಿಧ ಕೆಲಸಗಳನ್ನು ಕೈಗೊಳ್ಳಲು ನಿರ್ಭಯಾ ನಿಧಿ ಮೀಸಲಿಡಲಾಗಿದೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ’ಸುರಕ್ಷಿತ ನಗರ’ ಯೋಜನೆ ಜಾರಿಗೆ ತರಲಾಗಿದ್ದು, ಮೊದಲ ಹಂತದಲ್ಲಿ ₹ 612 ಕೋಟಿ ಮೌಲ್ಯದ ಕೆಲಸಕ್ಕೆ ಟೆಂಡರ್ ಪ್ರಕ್ರಿಯೆ
ಆರಂಭವಾಗಿತ್ತು.

‘ಟೆಂಡರ್‌ ಹಂಚಿಕೆಯಲ್ಲಿ ಅಕ್ರಮ ನಡೆದಿದೆ’ ಎಂದು ಡಿ.ರೂಪಾ ಆರೋಪಿಸಿದ್ದರು. ಇದೇ ವಿಚಾರವಾಗಿ ರೂಪ ಮತ್ತು ನಿಂಬಾಳ್ಕರ್‌ ನಡುವೆ ಜಟಾಪಟಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.