ADVERTISEMENT

ನಿತ್ಯಾನಂದ ಅರ್ಜಿ ವಿಚಾರಣೆ ಮುಂದಕ್ಕೆ: ತಡೆ ಆದೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 20:33 IST
Last Updated 18 ಡಿಸೆಂಬರ್ 2019, 20:33 IST

ಬೆಂಗಳೂರು: ಅತ್ಯಾಚಾರ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧ ರಾಮನಗರ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ಜನವರಿ 10ರವರೆಗೆ ವಿಸ್ತರಿಸಿದೆ.

‘ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ದೂರುದಾರ ಲೆನಿನ್ ಕುರುಪ್ಪನ್ ಸಲ್ಲಿಸಿರುವ ಅರ್ಜಿ ನ್ಯಾಯಮೂರ್ತಿ ಜಿ. ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು. ದಿನದ ಕೋರ್ಟ್ ಕಲಾಪದ ಅವಧಿ ಮುಕ್ತಾಯವಾದ ಕಾರಣ ವಿಚಾರಣೆ ಮುಂದೂಡಿದ ಪೀಠ, ಅಧೀನ ನ್ಯಾಯಾಲಯದ ವಿಚಾರಣೆಗೆ ಈ ಮೊದಲು ನೀಡಿದ್ದ ತಡೆ ಆದೇಶವನ್ನು ವಿಸ್ತರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT