ADVERTISEMENT

ಶಾಸಕ ರೆಡ್ಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹಿಂದೂಗಳನ್ನು ಕೆಣಕದಿರಿ ಎಂದು ಪ್ರಚೋದನಕಾರಿ ಭಾಷಣ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 19:00 IST
Last Updated 10 ಜನವರಿ 2020, 19:00 IST

ಬಳ್ಳಾರಿ: ‘ಹಿಂದೂಗಳನ್ನು ಕೆಣಕದಿರಿ’ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಬಳಿಕ ಬಂಧನ ಭೀತಿ ಎದುರಿಸುತ್ತಿದ್ದ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿತು.

ವಕೀಲ ಸಿದ್ಧಾರೆಡ್ಡಿ ಅವರ ಮೂಲಕ ರೆಡ್ಡಿ ಅರ್ಜಿ ಸಲ್ಲಿಸಿದ್ದರು. ‘ಕೋಮು ಸೌಹಾರ್ದ ಕದಡುವ ಗಂಭೀರ ಪ್ರಯತ್ನ ನಡೆಸಿರುವುದರಿಂದ ರೆಡ್ಡಿಯವರಿಗೆ ಜಾಮೀನು ನೀಡಬಾರದು’ ಎಂದು ಸರ್ಕಾರಿ ಅಭಿಯೋಜಕ ಸುಂಕಣ್ಣ ಅವರ ವಾದವನ್ನು ನ್ಯಾಯಾಧೀಶರು ಎತ್ತಿಹಿಡಿದರು.

ನಗರದಲ್ಲಿ ಜನವರಿ 3ರಂದು ದೇಶಭಕ್ತ ನಾಗರಿಕರ ವೇದಿಕೆಯು ಪೌರತ್ವ (ತಿದ್ದುಪಡಿ) ಕಾಯ್ದೆ ಪರವಾಗಿ ಹಮ್ಮಿಕೊಂಡಿದ್ದ ಜಾಗೃತಿ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ರೆಡ್ಡಿ ಮಾತನಾಡಿದ್ದರು. ಬಳಿಕ ಅವರ ವಿರುದ್ಧ ಗಾಂಧಿನಗರ ಠಾಣೆಯಲ್ಲಿ ಮೂರು ಎಫ್‌ಐಆರ್‌ ದಾಖಲಾಗಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.