ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಶನಿವಾರ (ಜೂನ್ 20) ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಕಾಮರಾಜ ರಸ್ತೆ, ಡಿಕನ್ಸನ್ ರಸ್ತೆ, ಡಿಸ್ಪೆನ್ಸರಿ ರಸ್ತೆ, ಎನ್.ಪಿ.ರಸ್ತೆ, ಇಬ್ರಾಹಿಂ ರಸ್ತೆ, ವಿ.ಪಿ. ರಸ್ತೆ, ಇನ್ಫೆಂಟ್ರಿ ರಸ್ತೆ, ಎಚ್ಎಎಲ್ ಕಾರ್ಪೊರೇಟ್ ಕಚೇರಿ, ಆದಾಯ ತೆರಿಗೆ ಕಚೇರಿ, ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರಬಾ ರಸ್ತೆ, ಚಿನ್ನಸ್ವಾಮಿ ಕ್ರೀಡಾಂಗಣ, ಸೇಂಟ್ ಮಾರ್ಕ್ಸ್ ರಸ್ತೆ, ಗರುಡಾ ಮಾಲ್, ಹಲಸೂರು ಮಾರುಕಟ್ಟೆ, ಅಶೋಕ ನಗರ, ಟ್ರಿನಿಟಿ, ರೆಸಿಡೆನ್ಸಿ ರಸ್ತೆ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.