ಹೆಸರಘಟ್ಟ: ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಬೀದಿಯಲ್ಲಿ ಮುಖಗವಸು ಧರಿಸದೇ ತಿರುಗುತ್ತಿದ್ದನ್ನು ಪ್ರಶ್ನಿಸಿದ ಮಹಿಳೆಯರ ಮೇಲೆ ಆತನ ಸ್ನೇಹಿತ ಹಲ್ಲೆ ನಡೆಸಿದ್ದಾನೆ.
ಕೈಮೇಲೆ ಕ್ವಾರಂಟೈನ್ ಮುದ್ರೆ ಹಾಕಲಾಗಿದ್ದ ವ್ಯಕ್ತಿಯೊಬ್ಬ ಚಿಕ್ಕಬಾಣಾವರ ಗ್ರಾಮದ ಕೆಂಪಾಪುರ ಮುಖ್ಯರಸ್ತೆಯಲ್ಲಿ ಮುಖಗವಸು ಧರಿಸದೆ ಹೋಗುತ್ತಿದ್ದ. ಇದನ್ನು ಗಮನಿಸಿದನಳಿನಿ ಮತ್ತು ನೇತ್ರಾವತಿ ಎಂಬುವರು ಈ ಕುರಿತು ವ್ಯಕ್ತಿಯನ್ನು ಪ್ರಶ್ನಿಸಿದ್ದಾರೆ. ಆದರೆ, ಈ ವ್ಯಕ್ತಿಯ ಜೊತೆಗಿದ್ದ ಬಸವ ಎಂಬುವನು ಮಹಿಳೆಯರನ್ನು ನಿಂದಿಸಿ, ಹಲ್ಲೆ ನಡೆಸಿದ್ದಾನೆ ಎಂದುಸೋಲದೇವನಹಳ್ಳಿ ಪೊಲೀಸರು ತಿಳಿಸಿದರು.
‘ಮಹಿಳೆಯರು ಜೋರಾಗಿ ಕಿರುಚಿಕೊಂಡ ಕೂಡಲೇ ಆರೋಪಿ ಬಸವ ಮತ್ತು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಗ್ರಾಮಸ್ಥರಲ್ಲಿ ಭೀತಿ:ಹತ್ತು ದಿನಗಳಿಂದ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಪರಾರಿಯಾಗಿರುವುದರಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ.
‘ಆತನಲ್ಲಿ ಸೋಂಕು ಇರುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ಒಂದೇ ವೇಳೆ ಇದ್ದರೆ ಅವನಿಂದ ಸೋಂಕು ಹರಡುತ್ತದೆ. ಪೊಲೀಸರು ಆದಷ್ಟು ಬೇಗ ಆರೋಪಿ ಮತ್ತು ಕ್ವಾರಂಟೈನ್ ವ್ಯಕ್ತಿಯನ್ನು ಬಂಧಿಸಬೇಕು’ ಎಂದು ಗ್ರಾಮದ ನಿವಾಸಿ ನಾರಾಯಣಪ್ಪ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.