ಬೆಂಗಳೂರು: ರಾಜಗೋಪಾಲನಗರದಲ್ಲಿ ಯುವಕನೊಬ್ಬ ಬಿಬಿಎಂಪಿ ಮಾರ್ಷಲ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
‘ಘಟನೆ ಬಗ್ಗೆ ಮಾರ್ಷಲ್ ಎನ್.ದರ್ಶನ್ ಎಂಬುವರು ದೂರು ನೀಡಿದ್ದರು. ಸ್ಥಳೀಯ ನಿವಾಸಿಯಾದ ಆರೋಪಿ ಬಾಲು ಎಂಬಾತನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ದರ್ಶನ್ ಅವರು ಪೀಣ್ಯ 2ನೇ ಹಂತದ ಬಸ್ ತಂಗುದಾಣದ ಬಳಿ ಬುಧವಾರ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾಸ್ಕ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದಿದ್ದ ಬಾಲು, ಮಾರ್ಷಲ್ ಜೊತೆ ಜಗಳ ತೆಗೆದಿದ್ದ. ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಿದ್ದ. ಗುರುವಾರ ನಮಗೆ ಸಿಕ್ಕಿಬಿದ್ದ’ ಎಂದೂ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.