ADVERTISEMENT

ನೋಡಲ್ ಅಧಿಕಾರಿ ನಾಪತ್ತೆ: ಶಾಸಕ ರಿಜ್ವಾನ್ ಅರ್ಷದ್ ದೂರು

​ಪ್ರಜಾವಾಣಿ ವಾರ್ತೆ
Published 7 ಮೇ 2021, 16:42 IST
Last Updated 7 ಮೇ 2021, 16:42 IST
ರಿಜ್ವಾನ್ ಅರ್ಷದ್
ರಿಜ್ವಾನ್ ಅರ್ಷದ್   

ಬೆಂಗಳೂರು: ‘ರೆಮ್‌ಡಿಸಿವಿರ್ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಸೇರಿದಂತೆ ಹಲವು ಅಕ್ರಮಗಳು ನಡೆಯುತ್ತಿದ್ದು, ಅದನ್ನು ತಡೆಯಬೇಕಾದ ನೋಡಲ್ ಅಧಿಕಾರಿ ನಾಪತ್ತೆಯಾಗಿದ್ದಾರೆ’ ಎಂದು ಆರೋಪಿಸಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ಪೊಲೀಸರು, ‘ಠಾಣೆಗೆ ಬಂದು ಶಾಸಕ ದೂರು ನೀಡಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.

‘ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಅಕ್ರಮಗಳೂ ನಡೆಯುತ್ತಿವೆ. ಇದನ್ನು ತಡೆದು ಆಸ್ಪತ್ರೆಗಳ ಜೊತೆ ಸಮನ್ವಯ ಸಾಧಿಸಲು ರಾಜ್ಯ ಸರ್ಕಾರವು ಕೆಂಪಯ್ಯ ಸುರೇಶ್ ಎಂಬುವರನ್ನು ನೋಡಲ್ ಅಧಿಕಾರಿ ಆಗಿ ನೇಮಿಸಿದೆ. ಶಾಸಕನಾದ ನನ್ನ ಕೈಗೂ ಅವರು ಸಿಗುತ್ತಿಲ್ಲ. ಅವರನ್ನು ಹುಡುಕಿಕೊಡಿ’ ಎಂದು ದೂರಿನಲ್ಲಿ ರಿಜ್ವಾನ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.