ADVERTISEMENT

ಹಂಸಲೇಖಗೆ ಎನ್‌.ಟಿ.ಆರ್‌ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 19:21 IST
Last Updated 6 ಜುಲೈ 2018, 19:21 IST
ಹಂಸಲೇಖ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಮುನಿರತ್ನ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪಿಇಎಸ್ ವಿ.ವಿ ಸಂಸ್ಥಾಪಕ ಎಂ.ಆರ್‌.ದೊರೆಸ್ವಾಮಿ, ಲಹರಿ ವೇಲು, ಸಂಸ್ಥೆಯ ಅಧ್ಯಕ್ಷ ಆರ್‌.ವಿ.ಹರೀಶ್ ಇದ್ದಾರೆ –ಪ್ರಜಾವಾಣಿ ಚಿತ್ರ
ಹಂಸಲೇಖ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಮುನಿರತ್ನ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪಿಇಎಸ್ ವಿ.ವಿ ಸಂಸ್ಥಾಪಕ ಎಂ.ಆರ್‌.ದೊರೆಸ್ವಾಮಿ, ಲಹರಿ ವೇಲು, ಸಂಸ್ಥೆಯ ಅಧ್ಯಕ್ಷ ಆರ್‌.ವಿ.ಹರೀಶ್ ಇದ್ದಾರೆ –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕರ್ನಾಟಕ ತೆಲುಗು ಅಕಾಡೆಮಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ‘ಎನ್‌.ಟಿ.ಆರ್‌. ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ರಂಗ ಸಾಧಕರ ವಿಭಾಗದಲ್ಲಿ ಪ್ರಶಸ್ತಿ ಸ್ವೀಕರಿಸಬೇಕಿದ್ದ ಅರುಂಧತಿ ನಾಗ್‌ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿಲ್ಲ.

ಹಂಸಲೇಖ, ‘ಕನ್ನಡ ಹಾಗೂ ತೆಲುಗು ಭಾಷೆಯ ಸಂಬಂಧ ಹೀಗೆಯೇ ಮುಂದುವರಿಯಲಿ. ನಟ ರಾಜ್‌ಕುಮಾರ್‌ ಅವರ ಹೆಸರಿನಲ್ಲಿಯೂ ಪ್ರಶಸ್ತಿ ಕೊಡುವ ಯೋಜನೆ ಈ ಸಂಸ್ಥೆಗೆ ಇದೆ. ಇದು ಎರಡೂ ಭಾಷೆಯ ನಂಟನ್ನು ಇನ್ನಷ್ಟು ಹೆಚ್ಚಿಸಲಿದೆ’ ಎಂದರು.

ADVERTISEMENT

ಪಿಇಎಸ್‌ ವಿಶ್ವವಿದ್ಯಾಲಯ ಸಂಸ್ಥಾಪಕ ಎಂ.ಆರ್‌.ದೊರೆಸ್ವಾಮಿ, ‘ಕನ್ನಡ ಸಿನಿಮಾ ರಂಗಕ್ಕೆ ರಾಜ್‌ಕುಮಾರ್‌ ಕಣ್ಣು ಇದ್ದಂತೆ. ಕನ್ನಡ ಹಾಗೂ ತೆಲುಗು ಭಾಷೆ ಹಾಲು–ಸಕ್ಕರೆಯಂತೆ ಬೆರೆತಿವೆ. ಕೃಷ್ಣದೇವರಾಯರ ಕಾಲದಿಂದ ಇಲ್ಲಿಯವರೆಗೂ ಈ ಭಾಷಿಕರ ನಡುವೆ ಯಾವುದೇ ಜಗಳ ಇಲ್ಲ. ಇದು ಹೀಗೆ ಮುಂದುವರಿಯಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.