ಬೆಂಗಳೂರು: ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದ್ದರೂ ಸುಮಾರು 30ರಷ್ಟು ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (ಒ.ಸಿ.) ನೀಡಿದ ಬಿಬಿಎಂಪಿ ನಗರ ಯೋಜನೆಯ ವಿಭಾಗದ ವಿರುದ್ಧ ದೂರುಗಳು ದಾಖಲಾಗಿವೆ.
ಬಹುತೇಕ ಪ್ರಕರಣಗಳಲ್ಲಿ ಶೇ 40 ರಷ್ಟು ನಿಯಮಗಳನ್ನು ಉಲ್ಲಂಘಿಸ ಲಾಗಿದೆ. ಕೆಲವು ಪ್ರಕರಣಗಳಲ್ಲಿ ಅಧಿ ಕಾರಿಗಳು ಉದ್ದೇಶಪೂರ್ವಕವಾಗಿಯೇ ರಸ್ತೆಯ ಅಗಲವನ್ನು ವಿಸ್ತರಿಸುತ್ತಿದ್ದಾರೆ. ಈ ಮೂಲಕ ನಿಯಮ ಉಲ್ಲಂಘಿಸಿದ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ದೂರಲಾಗಿದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ನಗರಾಭಿವೃದ್ಧಿ ಇಲಾಖೆಯು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಟಸ್ಥ ಸಂಸ್ಥೆಗೆ ಸೂಚನೆ ನೀಡಿದೆ. ಬೆಂಗಳೂರು ಕಲ್ಯಾಣ ಸಮಿತಿ ಅಧ್ಯಕ್ಷ ಎ.ಪಿ. ಪವನ್ ಕುಮಾರ್ ಅವರು ನೀಡಿದ ದೂರಿನ ಅನ್ವಯ ಈ ಸೂಚನೆ ನೀಡಲಾಗಿದೆ. ಇಬ್ಬರು ಅಧಿಕಾರಿಗಳ ನಡುವಣ ವೈರತ್ವದಿಂದ ಈ ವಿಷಯ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಮುಖ ಐದು ಪ್ರಕರಣಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆ ತನಿಖೆ ನಡೆಸುವಂತೆ ಸೂಚಿಸಿದೆ.
ಎರಡು ಕಟ್ಟಡಗಳ ನಡುವೆ 5 ಮೀಟರ್ ಬದಲಾಗಿ ಕೇವಲ 3.5 ಮೀಟರ್ ಜಾಗ ಬಿಡುವ ಮೂಲಕ ಶೇ32ರಷ್ಟು ನಿಯಮಗಳನ್ನು ಉಲ್ಲಂಘಿ ಸಿದ ಪ್ರಕರಣ, ಶೇ 35ರಷ್ಟು ನಿಯಮ ಉಲ್ಲಂಘಿಸಿದ ಪ್ರಕರಣ ಮತ್ತು ವಿವಿಧ ಪ್ರದೇಶಗಳಲ್ಲಿನ ರಸ್ತೆ ಅಗಲವನ್ನು ಉಲ್ಲೇಖಿಸಿ ಕಟ್ಟಡ ನಿರ್ಮಾಣ ಯೋಜನೆಗೆ ಮಂಜೂರಾತಿ ನೀಡುವ ಮೂಲಕ ಬಿಲ್ಡರ್ಗೆ ಸುಮಾರು ₹50 ಕೋಟಿ ಲಾಭವಾಗುವಂತೆ ಅನುಕೂಲ ಮಾಡಿಕೊಟ್ಟಿರುವುದು ಹಾಗೂ ಶೇ 40ರಷ್ಟು ನಿಯಮ ಉಲ್ಲಂಘಿಸಿದ್ದರೂ ಸ್ವಾಧೀನಾನುಭವ ಪತ್ರ ನೀಡಿರುವುದು ಇದರಲ್ಲಿ ಸೇರಿವೆ.
ಬಿಬಿಎಂಪಿ ಉತ್ತರ ವಲಯದಲ್ಲಿ ಈ ಪ್ರಕರಣಗಳು ನಡೆದಿವೆ. ರಾಜಕಾಲುವೆ ಮತ್ತು ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡಗಳನ್ನು ನಿರ್ಮಿಸಿರುವ ಪ್ರಕರಣಗಳು ಸಹನಡೆದಿವೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.