ಬೆಂಗಳೂರು: ಹಳೇ ನೋಟುಗಳನ್ನು ಬದಲಾವಣೆ ಮಾಡುವುವುದಾಗಿ ಹೇಳಿ ವಂಚಿಸುತ್ತಿದ್ದ ಜಾಲವನ್ನು ಯಶವಂತಪುರ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ .
ದಿನೇಶ್, ರಾಸಿಕ್, ನಾಗರಾಜ ಹಾಗೂ ಕೃಷ್ಣಮೂರ್ತಿ ಬಂಧಿತರು. ಕೇರಳದ ಉದ್ಯಮಿಯೊಬ್ಬರಿಂದ ಹಳೆ ನೋಟು ತಂದಿದ್ದ ಆರೋಪಿಗಳು.
ಇನ್ಸ್ಪೆಕ್ಟರ್ ಮೊಹಮ್ಮದ್ ಮುಖರಾಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.
₹96 ಲಕ್ಷ ಮೌಲ್ಯದ ಹಳೇ ನಿಷೇಧಿತ ನೋಟುಗಳನ್ನು ಜಪ್ತಿ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.